•ಮಾನವ – ಕಾಡಾನೆ ಸಂಘರ್ಷವನ್ನು ನಿಯಂತ್ರಿಸಲು ರಾಮನಗರ ಮತ್ತು ಬನ್ನೇರುಘಟ್ಟ ಪ್ರದೇಶಗಳಲ್ಲಿ ಎರಡು ಹೊಸ ಆನೆ ಕಾರ್ಯಪಡೆ ರಚನೆ.
•ಬೀದರ್ನಲ್ಲಿ ಹೆಚ್ಚಾಗಿ ಕಂಡುಬರುವ ಕೃಷ್ಣಮೃಗಗಳ ಸಂರಕ್ಷಣೆಗೆ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶವನ್ನಾಗಿ ಘೋಷಣೆ; ಈ ಪ್ರದೇಶದ ರಕ್ಷಣೆ ಮತ್ತು ನಿರ್ವಹಣೆಗೆ 2 ಕೋಟಿ ರೂ.
•ಬಯಲು ಸೀಮೆಯ 17 ಜಿಲ್ಲೆಗಳಲ್ಲಿ ಮುಂದಿನ 5 ವರ್ಷಗಳಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಹಸಿರೀಕರಣ ಕಾರ್ಯಕ್ರಮ.
•Green House Gases (GHG) ಹೊರಸೂಸುವಿಕೆಯನ್ನು ನಿಯಂತ್ರಿಸಲು ಹಾಗೂ ಮೇಲ್ವಿಚಾರಣೆ ಮಾಡಲು ಹೊಸ ನೀತಿ ಜಾರಿ.
“ಪ್ರವಾಸೋದ್ಯಮಕ್ಕೆ ಉತ್ತೇಜನ”: •ಕಿತ್ತೂರು ಕರ್ನಾಟಕ ಭಾಗದಲ್ಲಿನ ಸವದತ್ತಿ ಯಲ್ಲಮ್ಮನ ಗುಡ್ಡ, ದೇವರಗುಡ್ಡ, ಕಪ್ಪತ್ತಗುಡ್ಡ, ಬಾದಾಮಿ ಬನಶಂಕರಿ, ಲಕ್ಕುಂಡಿ, ಮಾಗಡಿ ಪಕ್ಷಿಧಾಮ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಖೇಡ, ಬೀದರ್, ರಾಯಚೂರು ಹಾಗೂ ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ.
•ಕಡಲ ತೀರದ ಪ್ರವಾಸೋದ್ಯಮ ಅಭಿವೃದ್ಧಿಗೆ ಕರಾವಳಿ ಬೀಚ್ ಪ್ರವಾಸೋದ್ಯಮ ಕಾರ್ಯಪಡೆ ರಚನೆ. ಅಂತಾರಾಷ್ಟ್ರೀಯ ಸರ್ಫಿಂಗ್ ತಾಣವಾಗಿ ಸಸಿಹಿತ್ಲು ಕಡಲ ತೀರದ ಅಭಿವೃದ್ಧಿ.
•ರಾಜ್ಯದ ವಿವಿಧ ಪ್ರವಾಸಿ ತಾಣಗಳಲ್ಲಿ ಯಾತ್ರಿನಿವಾಸ/ಡಾರ್ಮಿಟರಿ ನಿರ್ಮಾಣಕ್ಕೆ ಕ್ರಮ. •ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು ಮೇಲ್ದರ್ಜೆಗೇರಿಸಲು ಕ್ರಮ.