ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲೂಕಿನ ಆಲೂರು ದುದ್ದನಹಳ್ಳ ಗ್ರಾಮ ಪಂಚಾಯಿತಿಗೆ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ.ಎನ್. ಭೇಟಿ ನೀಡಿ ಪಂಚಾಯಿತಿ ಕಡತಗಳನ್ನು ಪರಿಶೀಲಿಸಿದರು.
ನಂತರ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣದ ಹಂತ ನೀರಕಾಲುವೆ ಕಾಮಗಾರಿಗಳು ಮತ್ತು ಸಂಜೀವಿನಿ ಕಟ್ಟಡದ ಕಾಮಗಾರಿ, ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಆಹಾರದ ಶುಚಿ ಮತ್ತು ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಂಗನವಾಡಿ ಮೇಲ್ವಿಚಾರಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದರು.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಜೊತೆ ಪಠ್ಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಶಾಲೆಯಲ್ಲಿರುವ ಸೌಲಭ್ಯಗಳ ಕುರಿತು, ಕುಡಿಯುವ ನೀರು, ಶೌಚಾಲಯ, ಬಿಸಿಯೂಟದ ಕುರಿತು ಹೀಗೆ ವಿವಿಧ ವಿಷಯಗಳ ಕುರಿತು ಮಕ್ಕಳೊಂದಿಗೆ ಚರ್ಚೆ ನಡೆಸಿದರು.
ಪ್ರಾರಂಭಗೊಂಡಿರುವ ಕೂಸಿನ ಮನೆ ಪರಿವೀಕ್ಷಣೆ ಮಾಡಿದರು. ಗ್ರಾಮ ಪಂಚಾಯಿತಿ ಅಧಿಕಾರಿ ಮತ್ತು ಕಾರ್ಯದರ್ಶಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತಿದರು.